ದಾವಣಗೆರೆ, ಮಾ. 28- ಅಮೆಚೂರ್ ಕಬಡ್ಡಿ ಸಂಸ್ಥೆ, ಜನಪ್ರಿಯ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಸ್ಥೆ ಇವರ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿನಿಂದ 31ರವರೆಗೆ ನಡೆಯುವ ಕಬ್ಬಡ್ಡಿ ಪ್ರೀಮಿಯರ್ ಲೀಗ್ -24 ಪಂದ್ಯಾವಳಿಗೆ ಜಯದೇವ ವೃತ್ತದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಿನ್ನೆ ಮ್ಯಾರಥಾನ್ ಏರ್ಪಡಿಸಲಾಗಿತ್ತು.
ಈ ಮ್ಯಾರಥಾನ್ ಅನ್ನು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹಾಗೂ ಅಮೆಚೂರ್ ಕಬಡ್ಡಿ ಸಂಸ್ಥೆಯ ಎಂ. ನಾಗರಾಜ್ ಉದ್ಘಾಟಿಸಿದರು.