ನಾಳೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ

ದಾವಣಗೆರೆ,ಏ.10- ಲೋಕ ಸಭೆ ಚುನಾವಣೆಗೆ ನಾಡಿದ್ದು ದಿನಾಂಕ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ದಾವಣಗೆರೆ ಕ್ಷೇತ್ರಕ್ಕೆ ಜಿಲ್ಲಾಧಿ ಕಾರಿಗಳ ಕಚೇರಿ ಚುನಾವಣಾಧಿಕಾರಿ ಗಳ ಕಚೇರಿಯಾಗಿದ್ದು, ದಿನಾಂಕ 12ರ ಶುಕ್ರವಾರ ಬೆಳಿಗ್ಗೆ 6 ರಿಂದ ಇದೇ ದಿನಾಂಕ 22ರ ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ ಎಂ.ವಿ. ಅವರು ಆದೇಶಿಸಿದ್ದಾರೆ.

error: Content is protected !!