ದಾವಣಗೆರೆ, ಏ.12- ಬಹುಜನ ಸಮಾಜ ಪಾರ್ಟಿಯಿಂದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇದೇ ದಿನಾಂಕ 15ರಂದು ನಾಮಪತ್ರ ಸಲ್ಲಿಸುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಟುಂಬ ರಾಜಕಾರಣದಿಂದ ಜನರು ಬೇಸತ್ತಿದ್ದು, ನಮ್ಮ ಪಕ್ಷವನ್ನು ಬೆಂಬಲಿಸಲಿ ದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಮಪತ್ರ ಸಲ್ಲಿಕೆ ಸಮಯದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಮುನಿಯಪ್ಪ, ಬೆಂಗಳೂರು ವಿಭಾಗದ ಉಸ್ತುವಾರಿ ಎಂ.ನಾಗೇಶ್, ರಾಜ್ಯ ಕಾರ್ಯದರ್ಶಿ ಹೆಚ್.ಮಲ್ಲೇಶ್ ಇತರರು ಭಾಗವಹಿಸಲಿ ದ್ದಾರೆ ಎಂದರು. ಪಕ್ಷದ ಮುಖಂಡ ಎಂ.ಸಿ. ಮೋಹನ್ ಕುಮಾರ್ ಮಾತನಾಡಿ, ಭಾರತ ಸಂವಿಧಾನದ ಪೂರ್ವ ಪೀಠಿಕೆಯನ್ನು ಯಥಾ ಸ್ಥಿತಿಯಲ್ಲಿ ಜಾರಿಗೆ ತರುವುದೇ ನಮ್ಮ ಪಕ್ಷದ ಗ್ಯಾರಂಟಿಯಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೊನ್ನಾಳಿ ತಾಲ್ಲೂಕು ಅಧ್ಯಕ್ಷ ಕುಬೇರಪ್ಪ, ಸಂಯೋ ಜಕ ಕೃಷ್ಣಪ್ಪ ಕುಂಕೋವಾ, ಮುಖಂಡ ಸಂತೋಷ್ ಎಸ್., ಜಿಲ್ಲಾ ಕಾರ್ಯದರ್ಶಿ ಜೆ.ಡಿ. ಕೃಷ್ಣಮೂರ್ತಿ ಉಪಸ್ಥಿತರಿದ್ದರು.