ದಾವಣಗೆರೆ, ಏ. 16 – ಚುನಾವಣಾ ಮತಗಟ್ಟೆ ಮಟ್ಟದ ಅಧಿಕಾರಿ ಸಿಬ್ಬಂದಿಗಳಿಗೆ ಚನ್ನಗಿರಿಯಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಬೆಳಿಗ್ಗೆ ಹಾಜರಾಗಿ ಮಧ್ಯಾಹ್ನ ತರಬೇತಿಗೆ ಹಾಜರಾಗದೇ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ಹೊರ ಹೋಗಿದ್ದು ಇದನ್ನು ಪ್ರಶ್ನಿಸಿದ ತಹಶೀಲ್ದಾರ್ ಅವರೊಂದಿಗೆ ಅನುಚಿತ ವರ್ತನೆ ತೋರಿದ ಚನ್ನಗಿರಿ ಎಸ್.ಕೆ.ಎಂ.ಎಸ್ ಮಿಲ್ಲತ್ ಪ್ರೌಢಶಾಲೆ ಸಹ ಶಿಕ್ಷಕ ಸೈಯದ್ ಸುಲ್ತಾನ್ ಅಹಮದ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.
May 22, 2024