ಕೆ.ಎಸ್‌.ಎಸ್‌ ಕಾಲೇಜಿನಲ್ಲಿ ಇಂದು ವಿಶ್ವ ಭೂ ದಿನಾಚರಣೆ

ಕರ್ನಾಟಕ ರಾಜ್ಯ ವಿಜ್ಞಾ ಪರಿಷತ್‌ ಜಿಲ್ಲಾ ಬಾಲಭವನ ಸಮಿತಿ,   ಕೆ.ಎಸ್‌.ಎಸ್‌. ಶಿಕ್ಷಣ ಮಹಾ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಕೆ.ಎಸ್‌.ಎಸ್‌. ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ಬೆಳಿಗ್ಗೆ 11ಕ್ಕೆ ವಿಶ್ವ ಭೂ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಗೌರವಾಧ್ಯಕ್ಷ ಡಾ. ಜೆ.ಬಿ. ರಾಜ್‌ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೆ.ಎಸ್‌.ಎಸ್‌. ಫೌಂಡೇಷನ್‌ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಕೆ. ಬಸವರಾಜ್‌ ಅಧ್ಯಕ್ಷತೆ ವಹಿಸುವರು. ನೇರ್ಲಿಗಿ ಪ್ರಕಾಶ್‌ `ಭೂಮಿ ಉಳಿದರೆ ನಾವೆಲ್ಲ’  ವಿಷಯ ಕುರಿತು ಉಪನ್ಯಾಸ ನೀಡುವರು. 

ಮುಖ್ಯ ಅತಿಥಿಗಳಾಗಿ ಬಿ.ಎಸ್‌. ಚನ್ನಬಸಪ್ಪ, ಆವರಗೆರೆ ರುದ್ರಮುನಿ ಉಪಸ್ಥಿತರಿರುವರು.

error: Content is protected !!