ನೇಹಾ ಹತ್ಯೆ : ನಗರದಲ್ಲಿ ಇಂದು ಪ್ರತಿಭಟನೆ

ದಾವಣಗೆರೆ, ಏ.21- ಹುಬ್ಬಳ್ಳಿಯ ನೇಹಾ ಹಿರೇಮಠ ಅವರನ್ನು  ಹತ್ಯೆ ಮಾಡಿದ ಜಿಹಾದಿ ಮನಸ್ಥಿತಿಯುಳ್ಳ ವ್ಯಕ್ತಿಯನ್ನು ಕೂಡಲೇ ಗಲ್ಲಿಗೇರಿಸಬೇಕು ಎಂದು ಬಿಜೆಪಿ ಯುವ ಹಾಗೂ ಮಹಿಳಾ ಮೋರ್ಚಾ ಆಗ್ರಹಿಸಿದೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಾಳೆ ಸೋಮವಾರ ಬೆಳಿಗ್ಗೆ 10.30ಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಎಲ್. ಶಿವಪ್ರಕಾಶ್, ಮಹಿಳಾ ಮೋರ್ಚಾದ ಪುಷ್ಪಾ ವಾಲಿ ಮಾತನಾಡಿದರು.  ಮುಖಂಡ ಶಿವಾನಂದ್, ಭಾಗ್ಯ ಪಿಸಾಳೆ ಪತ್ರಿಕಾಗೋಷ್ಠಿಯಲ್ಲಿದ್ದರು.

error: Content is protected !!