ನಗರದಲ್ಲಿ ಇಂದು ಕಲಿಕೆ ಜೊತೆಗೆ ಕೌಶಲ್ಯ ಕಾರ್ಯಾಗಾರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಂಜೆ ಕಾಲೇಜು ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಇಂದು ಬೆಳಗ್ಗೆ 10.30ಕ್ಕೆ `ಕಲಿಕೆ ಜೊತೆಗೆ ಕೌಶಲ್ಯ’ ಎಂಬ ತರಬೇತಿ ಕಾರ್ಯಾಗಾರ ನಡೆಯಲಿದೆ.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಜಿ. ಜಗದೀಶ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾ.ಶಿ.ಇ ಪ್ರಾದೇಶಿಕ ಜಂಟಿ ನಿರ್ದೇಶಕ ಕೆ.ಎ. ವಿಷ್ಣುಮೂರ್ತಿ, ದಾವಿವಿ ಕುಲಪತಿ ಬಿ.ಡಿ. ಕುಂಬಾರ್‌, ಕಾಲೇಜಿನ ಪ್ರಾಚಾರ್ಯ ಬಿ.ಸಿ. ದಾದಾಪೀರ್‌, ಡಾ.ಸಿ.ಕೆ. ಕೊಟ್ರಪ್ಪ, ಕೌಶಲ್ಯ ಅಭಿವೃದ್ಧಿ ನಿಗಮದ ನಿರ್ವಾಹಕ ವ್ಯವಸ್ಥಾಪಕ ಎಂ. ಜಿತೇಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

error: Content is protected !!