ಬುದ್ಧಿಶಕ್ತಿ ಬೆಳವಣಿಗೆಗೆ ಚದುರಂಗ ಸಹಕಾರಿ : ದಿನೇಶ್ ಕೆ. ಶೆಟ್ಟಿ

ಬುದ್ಧಿಶಕ್ತಿ ಬೆಳವಣಿಗೆಗೆ ಚದುರಂಗ ಸಹಕಾರಿ : ದಿನೇಶ್ ಕೆ. ಶೆಟ್ಟಿ

ದಾವಣಗೆರೆ, ಮೇ 21- ಜಿಲ್ಲಾ ಚೆಸ್ ಅಸೋಸಿಯೇಷನ್‌ನಿಂದ ನಗರದಲ್ಲಿ ಗುರುಭವನದಲ್ಲಿ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯನ್ನು  ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಚದುರಂಗ ಆಟ ಆಡುವು ದರಿಂದ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ ಯಾಗುತ್ತದೆ. ಮಕ್ಕಳು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ಪ್ರಬಲರಾಗುತ್ತಾರೆ. ಇಂತ ಹ ಆಟಗಳು ಹೆಚ್ಚಿನ ರೀತಿಯಲ್ಲಿ ಮಕ್ಕಳಿಗೆ ಸಿಗುವಂತಾಗಲಿ, ಮಕ್ಕಳು ರಾಷ್ಟ್ರ ಮತ್ತು ರಾಜ್ಯಮಟ್ಟಗಳಲ್ಲಿ ಹೆಸರು ಮಾಡಲಿ, ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಅಂತ ರರಾಷ್ಟ್ರೀಯ, ರಾಷ್ಟ್ರೀಯ ಪಂದ್ಯಾವಳಿಗಳು ನಡೆಯಲಿ ಎಂದು ಹೇಳಿದರು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಡಿ.ಎನ್.ಜಗದೀಶ್, ಅಂತರರಾಷ್ಟ್ರೀಯ ಚೆಸ್ ತೀರ್ಪುಗಾರರಾದ ಪ್ರಾಣೇಶ್ ಯಾದವ್, ವಿಜಯ್ ಕುಮಾರ್, ಪಂದ್ಯಾವಳಿಯ ಆಯೋಜಕರಾದ ಯುವರಾಜ್,  ಮಂಜುಳಾ ಯುವರಾಜ್ ಉಪಸ್ಥಿತರಿದ್ದರು.

error: Content is protected !!