ಬಸವರಾಜ, ವಕೀಲರ ಸಂಘದ ಅಧ್ಯಕ್ಷ

ಬಸವರಾಜ, ವಕೀಲರ ಸಂಘದ ಅಧ್ಯಕ್ಷ

ಜಗಳೂರು, ಮೇ 26 – ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಯುವ ನ್ಯಾಯವಾದಿ ಟಿ. ಬಸವರಾಜ್ ಮರೇನಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಅಧ್ಯಕ್ಷ ಸ್ಥಾನಕ್ಕೆ ಟಿ. ಬಸವರಾಜ್ ಮರೇನಹಳ್ಳಿ ಮತ್ತು ಬಿ. ಪಂಪಣ್ಣ ಹಾಗೂ ಎಸ್. ಹಾಲಪ್ಪ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪಡೆಯಲು ಕೊನೆಯ ದಿನವಾಗಿದ್ದ ಶನಿವಾರ ಬಿ. ಪಂಪಣ್ಣ ಹಾಗೂ ಹಾಲಪ್ಪ ಅವರು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದರಿಂದ ಟಿ. ಬಸವರಾಜ್ ಮರೇನಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೆ.ಎಸ್. ಪ್ರಕಾಶ್ ಹಾಗೂ ಕಾರ್ಯದರ್ಶಿಯಾಗಿ ಎ.ಕೆ. ಪರಶುರಾಮ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಹಾಗೂ ವಕೀಲ ಸಣ್ಣೋಬಯ್ಯ ಘೋಷಿಸಿದರು.  ಅಧ್ಯಕ್ಷರಾಗಿದ್ದ ಈ ಓಂಕಾರಪ್ಪ,  ಕಾರ್ಯದರ್ಶಿ ಕೆ.ವಿ. ರುದ್ರೇಶ್ ಅವರ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಿತು.

error: Content is protected !!