ನದಿಯಲ್ಲಿ ನೀರಿನ ಹರಿವು ಹೆಚ್ಚಳ

ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಶಿವಮೊಗ್ಗ, ಮೇ 26 – ಜಿಲ್ಲೆಯಲ್ಲಿ ಮತ್ತು ಹೊನ್ನಾಳಿ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಹೊನ್ನಾಳಿ ಸಮೀಪ ತುಂಗಭದ್ರಾ ನದಿಯಲ್ಲಿ ಭಾನುವಾರ ನೀರಿನ ಹರಿವು ಹೆಚ್ಚಾಗುತ್ತಿರುವುದು ಕಂಡು ಬಂತು. ಇದರಿಂದಾಗಿ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. 

ಹಾವೇರಿ, ಗದಗ ಜಿಲ್ಲೆಗಳಿಗೆ ಕುಡಿಯುವ ಉದ್ದೇ ಶಕ್ಕೆ ಭದ್ರಾ ಜಲಾಶಯದಿಂದ ಮೇ 23 ರಿಂದ ಮೇ 28 ರವರೆಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನಂತೆ ಒಟ್ಟು 1 ಟಿಎಂಸಿ ನೀರು ಬಿಡುಗಡೆ ಮಾಡಲು ವಾರದ ಹಿಂದೆ ತೀರ್ಮಾನಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೀಗ ನದಿಯಲ್ಲಿ ಮಳೆ ನೀರು ಹೆಚ್ಚಾಗುತ್ತಿರುವ ಕಾರಣ ಜಲಾಶಯದಿಂದ 500 ಕ್ಯೂಸೆಕ್ಸ್ ನೀರನ್ನು ಮಾತ್ರ ನದಿಗೆ ಹರಿಸಲಾಗುತ್ತಿದೆ ಎನ್ನಲಾಗಿದೆ.

error: Content is protected !!