ಪರೀಕ್ಷೆಗೊಳಪಡಿಸಿದ ನಂತರವೇ ಬಿತ್ತನೆ ಬೀಜಗಳನ್ನು ವಿತರಿಸಬೇಕು

ಪರೀಕ್ಷೆಗೊಳಪಡಿಸಿದ ನಂತರವೇ ಬಿತ್ತನೆ ಬೀಜಗಳನ್ನು ವಿತರಿಸಬೇಕು

ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್. ಬಸವಂತಪ್ಪ ನಿರ್ದೇಶನ

ದಾವಣಗೆರೆ, ಮೇ 27 – ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಭೂಮಿ ಹದ ಮಾಡಿಕೊಂಡು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರಿಗೆ ಕೃತಕ ಅಭಾವ ಸೃಷ್ಟಿ ಮಾಡದೇ, ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕೆಂದು ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್. ಬಸವಂತಪ್ಪ ಎಚ್ಚರಿಕೆ ನೀಡಿದರು.

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕಿನ ಆನಗೋಡು ಗ್ರಾಮದ ರೈತ ಸಂಪರ್ಕ ಕೇಂದ್ರಕ್ಕೆ ಇಂದು ದಿಢೀರ್ ಭೇಟಿ ನೀಡಿ, ರೈತರಿಗೆ ವಿತರಣೆ ಮಾಡಲು ದಾಸ್ತಾನು ಮಾಡಿರುವ ಬಿತ್ತನೆ ಬೀಜ, ರಸಗೊಬ್ಬರ ಪರಿಶೀಲನೆ ನಡೆಸಿದರು.

‘ಎಂ.ಕೆ., ಡಿಕೆಸಿ, ಗಂಗಾ ಕಾವೇರಿ’ ರೈತರ ಬೇಡಿಕೆ ಇರುವ ಮೆಕ್ಕೆಜೋಳ ಬಿತ್ತನೆ ಬೀಜಗಳು. ಆದರೆ ಇಲ್ಲಿ ಬೇರೆ ಕಂಪನಿಗಳ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿದ್ದೀರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಕೂಡಲೇ ಜಂಟಿ ಕೃಷಿ ನಿರ್ದೇಶಕರನ್ನು ದೂರ ವಾಣಿ ಮೂಲಕ ಸಂಪರ್ಕ ಮಾಡಿ, ರೈತರ ಬೇಡಿಕೆಗೆ ಅನುಗುಣವಾಗಿ ಮೆಕ್ಕೆಜೋಳ ಬಿತ್ತನೆ ಬೀಜ, ರಸ ಗೊಬ್ಬರ ತರಿಸಿ ವಿತರಣೆ ಮಾಡ ಬೇಕು. ರೈತರಿಗೆ ಬೇಡವಾದ ಬಿತ್ತನೆ ಬೀಜ ಇಲ್ಲಿ ದಾಸ್ತಾನು ಮಾಡಲಾ ಗಿದೆ. ಕೂಡಲೇ ಈ ಬೀಜಗಳನ್ನು ವಾಪಾಸ್ ಕಳುಹಿಸಿ, ರೈತರಿಗೆ ಬೇ ಕಾದ ಬಿತ್ತನೆ ಬೀಜ ವಿತರಿಸ ಬೇಕೆಂದು ತಾಕೀತು ಮಾಡಿದರು. 

ಹಿಂದಿನ ವರ್ಷದಲ್ಲಿ ಸಂಭವಿಸಿದ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಈಗ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆ ಬರುತ್ತಿದೆ. ಈ ಸಂದರ್ಭದಲ್ಲಿ ರೈತರಿಗೆ ಯಾವುದೇ ರೀತಿಯ ತೊಂ ದರೆ ಆಗದಂತೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಬೇಕು. ಜೊತೆಗೆ ಬಿತ್ತನೆಗೆ ಬೇಕಾದ ಕೃಷಿ ಉಪಕರಣಗಳನ್ನು ಸಮರ್ಪಕವಾಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿತ್ತನೆ ಬೀಜಗಳನ್ನು ಪ್ರಯೋಗಿಕವಾಗಿ ಬೀಜ ಹಾಕಿ ಪರೀಕ್ಷೆಗೆ ಒಳಪಡಿಸಬೇಕು. ಅದು ಉತ್ಕೃಷ್ಟವಾಗಿ ಮೊಳಕೆಯೊಡೆದರೆ ಆ ಬೀಜಗಳನ್ನು ರೈತರಿಗೆ ವಿತರಿಸಬೇಕು. ಈಗ ರೈತರಿಗೆ ಬೇಕಾದ ಬೀಜ ತಂದು ಪರೀಕ್ಷೆಗೊಳಪಡಿಸಿ ವಿತರಿಸಬೇಕೆಂದರೂ ಕನಿಷ್ಠ ಒಂದೂವರೆ ವಾರ ಸಮಯ ಬೇಕು. ಈ ಕೆಲಸ ಪೂರ್ವದಲ್ಲಿಯೇ ಮಾಡಿದರೆ ಈ ಸಮಸ್ಯೆ ಆಗುತ್ತಿರಲಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

error: Content is protected !!