ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಪರ ಜಿಲ್ಲಾ ಕಾಂಗ್ರೆಸ್‍ ಮತ ಯಾಚನೆ

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಪರ ಜಿಲ್ಲಾ ಕಾಂಗ್ರೆಸ್‍ ಮತ ಯಾಚನೆ

ದಾವಣಗೆರೆ, ಮೇ 30- ಬರುವ ಜೂನ್ 3 ರಂದು ನಡೆಯುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪರವಾಗಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ವಿವಿಧ ಕಾಲೇಜುಗಳಲ್ಲಿ ಮತಯಾಚಿಸಲಾಯಿತು.

ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಮೋತಿ ವೀರಪ್ಪ ಪದವಿ ಪೂರ್ವ ಕಾಲೇಜು, ಸೆಂಟ್ ಫಾಲ್ಸ್ ಕಾನ್ವೆಂಟ್, ಜೈನ್ ಸ್ಕೂಲ್ ಮತ್ತು ಸೀತಮ್ಮ ಕಾಲೇಜುಗಳಲ್ಲಿ ಮತಯಾಚನೆ ಮಾಡಲಾಯಿತು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಗೆಲ್ಲಲು  ಶಿಕ್ಷಕರೊಂದಿಗೆ ಸಭೆ ನಡೆಸಿ, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಪ್ರಯತ್ನ ಮಾಡಬೇಕು. ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರೊಂದಿಗೆ ಸಮನ್ವಯ ಸಾಧಿಸಿ, ಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳ ಮತದಾರರನ್ನು ತಲುಪುವ ಉದ್ದೇಶದಿಂದ ಪ್ರತಿಯೊಂದು ಅರ್ಹ ಶಾಲಾ – ಕಾಲೇಜುಗಳಿಗೆ ಭೇಟಿ ಮತಯಾಚಿಸಲಾಗುತ್ತಿದೆ. 

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪೂರ್ಣಿಮಾ, ಶ್ರೀನಿವಾಸ್ ಅವರ ಸಹೋದರಿ ಅನುಪಮ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಪಾಲಿಕೆ ಸದಸ್ಯ ಎ.ನಾಗರಾಜ್, ಮಾಜಿ ಸದಸ್ಯ ಡಿ.ಎನ್.ಜಗದೀಶ್, ಪ್ರಾಂಶುಪಾಲ ಪ್ರದೀಪ್ ಮತ್ತಿತರರಿದ್ದರು.

error: Content is protected !!