ದೃಶ್ಯಕಲಾ ಕಾಲೇಜಿನಲ್ಲಿ ಇಂದು ಭಿತ್ತಿಚಿತ್ರ ಶಿಬಿರ

ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ವತಿಯಿಂದ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ 7 ದಿನಗಳ ಭಿತ್ತಿಚಿತ್ರ ಕಲಾ ಶಿಬಿರದಲ್ಲಿ ಇಂದು ಮುಂಜಾನೆ 6.30ಕ್ಕೆ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ಬೋಧನಾ ಸಹಾಯಕ ಡಿ.ಹೆಚ್. ಸುರೇಶ್ ಅವರು ಧ್ವಜಾರೋಹಣ ನೆರವೇರಿಸುವರು.

ಸಂಜೆ 5.30ರ ಏರ್ಪಾಡಾಗಿರುವ ಕಾರ್ಯಕ್ರಮದಲ್ಲಿ `ಸಮಾಜದಲ್ಲಿ ಭಿತ್ತಿಪತ್ರಗಳ ಮಹತ್ವ’ ವಿಷಯ ಕುರಿತು ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ಬೋಧನಾ ಸಹಾಯಕ ಎಸ್.ಹೆಚ್. ಹರೀಶ್ ಅವರು ಉಪನ್ಯಾಸ ನೀಡುವರು. ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ಬೋಧನಾ ಸಹಾಯಕರಾದ ಡಾ. ಎಂ. ಸುಮಕಾಂತಿ ಅವರು ಮುಖ್ಯ ಅತಿಥಿಯಾಗಿದ್ದಾರೆ.

error: Content is protected !!