ಬನ್ನಿಕೋಡು ಎನ್ನೆಸ್ಸೆಸ್ : ಇಂದು ಪವಾಡ ಗುಟ್ಟು ಬಯಲು ಕಾರ್ಯಕ್ರಮ

ಹರಿಹರ ತಾಲ್ಲೂಕು ಬನ್ನಿಕೋಡು ಗ್ರಾಮದಲ್ಲಿ ದಾವಣಗೆರೆ ಡಿಆರ್‌ಎಂ ಕಾಲೇಜು ಹಾಗೂ ಬನ್ನಿಕೋಡು ಗ್ರಾಮಸ್ಥರ ಸಹಯೋಗದಲ್ಲಿ ಹಮ್ಮಿಕೊಂಡಿರುವ 2023-24 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಇಂದು ಸಂಜೆ 6 ಗಂಟೆಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ `ಪವಾಡ ಗುಟ್ಟು ಬಯಲು’ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 6.30 ಕ್ಕೆ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಿ.ಸಿ. ವಸಂತ ಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕಾರ್ಯದರ್ಶಿ ಎಂ. ಗುರುಸಿದ್ಧಸ್ವಾಮಿ ಅವರಿಂದ ಮೂಢನಂಬಿಕೆ ವಿರುದ್ಧ ವಿಜ್ಞಾನದ ಬೆಳಕು ಕಾರ್ಯಕ್ರಮ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯರಾದ ದಂಡಿಗೆಪ್ಪ , ರೇಣುಕಮ್ಮ, ರೇಖಾ ಮತ್ತಿತರರು ಭಾಗವಹಿಸಲಿದ್ದಾರೆ. 

error: Content is protected !!