ಜು.21ರಂದು ತಾಲ್ಲೂಕು ವೀರಶೈವ ಮಹಾಸಭಾದ ಚುನಾವಣೆ

ದಾವಣಗೆರೆ, ಜೂ.28- ಅಖಿಲ ಭಾರತ ವೀರಶೈವ ಮಹಾಸಭಾದ 2024ರಿಂದ 29ರ ಅವಧಿಗೆ ತಾಲ್ಲೂಕು ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನ ಮತ್ತು ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಜುಲೈ 21ಕ್ಕೆ ಚುನಾವಣೆ ನಡೆಯಲಿದೆ ಎಂದು ಉಪ ಚುನಾವಣಾಧಿಕಾರಿ ವಿ. ಶಿವಮೂರ್ತಿ ತಿಳಿಸಿದ್ದಾರೆ.

ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು ಜುಲೈ 4ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ಅಂದೇ ನಾಮಪತ್ರ ಹಿಂಪಡೆಯಬಹುದು ಮತ್ತು ಜು.5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 

ನಗರದ ಪಿ.ಬಿ. ರಸ್ತೆಯಲ್ಲಿನ ವ್ಹಿ.ಎಸ್‌ ಪ್ಲಾಜಾದಲ್ಲಿನ ಕಚೇರಿಯಲ್ಲಿ ನಾಮಪತ್ರ ಸ್ವೀಕಾರ ಮಾಡಲಾಗುವುದು.  ವಿವರಕ್ಕೆ ಸಂಪರ್ಕಿಸಿ : 9844550884, 9880132354.

error: Content is protected !!