ಸಾಲಕಟ್ಟೆಯಲ್ಲಿ ಇಂದು ಶಾಲಾ ಕೊಠಡಿ ಉದ್ಘಾಟನೆ

ಮಲೇಬೆನ್ನೂರು ಸಮೀಪದ ಸಾಲಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ಶಾಲಾ ಕೊಠಡಿಯನ್ನು ಇಂದು ಬೆಳಿಗ್ಗೆ 10.30ಕ್ಕೆ ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸಲಿದ್ದು, ಎಸ್‌ಡಿಎಂಸಿ ಅಧ್ಯಕ್ಷ ಟಿ.ಎಂ.ಮಹೇಶ್ವರಯ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳು : ಎಸ್.ಎಸ್.ಮಲ್ಲಿಕಾರ್ಜುನ್, ಡಾ. ಪ್ರಭಾ ಮಲ್ಲಿಕಾರ್ಜುನ್, ಜಿ.ಎಂ.ಸಿದ್ದೇಶ್ವರ, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಚಿದಾನಂದಗೌಡ ಮತ್ತಿತರರು.

error: Content is protected !!