ಕೆರೆ ತುಂಬಿಸಲು ಪ್ರಾಯೋಗಿಕ ಹರಿವು ಆರಂಭ

ಕೆರೆ ತುಂಬಿಸಲು ಪ್ರಾಯೋಗಿಕ ಹರಿವು ಆರಂಭ

ದಾವಣಗೆರೆ, ಜು.4- ತುಂಗಭದ್ರಾ ನದಿಯಿಂದ ಜಗಳೂರು ತಾಲ್ಲೂಕಿನ 47 ಕೆರೆ ಹಾಗೂ ಹರಪನಹಳ್ಳಿ ತಾಲ್ಲೂಕಿನ 6 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮುಕ್ತಾಯ ಹಂತದ ಲ್ಲಿದ್ದು, ಮುಂಗಾರಿನಲ್ಲಿ 30 ಕೆರೆ ಗಳಿಗೆ ನೀರು ತುಂಬಿಸಲು ಪ್ರಾ ಯೋಗಿಕ ಹರಿವು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು. 

ತುಂಗಭದ್ರಾ ನದಿಗೆ ದೀಟೂರು ಬಳಿ ನಿರ್ಮಿಸಿರುವ ಪಂಪ್ ಹೌಸ್ ಮತ್ತು ಜಗಳೂರು ತಾಲ್ಲೂಕಿನ ತುಪ್ಪದಳ್ಳಿ ಕೆರೆಗೆ ಗುರುವಾರ ಭೇಟಿ ನೀಡಿ ನೀರು ತುಂಬಿಸುವ ಯೋಜನೆ ವೀಕ್ಷಿಸಿದರು.

ಜಗಳೂರು ತಾಲ್ಲೂಕಿನ ಕೆರೆ ತುಂಬಿಸುವ ಏತ ನೀರಾವರಿ ಯೋಜನೆ 660.34 ಕೋಟಿ ರೂ.ಗಳಲ್ಲಿ ಕೈಗೊಂಡು  2019ರ ಡಿಸೆಂಬರ್ 9ರಿಂದ ಕಾಮಗಾರಿ ಆರಂಭಿಸಲಾಗಿದೆ ಎಂದ ಅವರು, ಯೋಜನೆಯಡಿ 1.379 ಟಿಎಂಸಿ ನೀರು ಮಳೆಗಾಲದಲ್ಲಿ ಬಳಕೆ ಮಾಡಿಕೊಂಡು ಕೆರೆ ಭರ್ತಿ ಮಾಡಲಾಗುತ್ತದೆ ಎಂದರು. 

ಕೆರೆ ತುಂಬಿಸಲು ಪ್ರಾಯೋಗಿಕ ಹರಿವು ಆರಂಭ - Janathavani

ಈ ಯೋಜನೆಯಿಂದ 65 ಗ್ರಾಮಗಳಿಗೆ ಅನುಕೂಲವಾಗ ಲಿದ್ದು, 1 ಲಕ್ಷಕ್ಕಿಂತ ಹೆಚ್ಚು ರೈತರಿಗೆ ಉಪಯೋಗ ಆಗುವ ಜತೆಗೆ ತಾಲ್ಲೂ ಕಿನ ಅಂತರ್ಜಲ ಮಟ್ಟ ಹೆಚ್ಚಾಗಿ ನೀರಿನ ಸಮಸ್ಯೆ ನಿವಾರಣೆಯಾ ಗಲಿದೆ ಎಂದು ಹೇಳಿದರು.

ಈ ಯೋಜನೆಯ ಮುಖ್ಯ ಪೈಪ್ ಲೈನ್ ಉದ್ದವು 220.68 ಕಿ.ಮೀ ಇರಲಿದೆ. ಎಂ.ಎಸ್ ಪೈಪ್ 142.62 ಕಿ.ಮೀ ಇದ್ದು, 115 ಕಿ.ಮೀ ಅಳವಡಿಸಲಾಗಿದೆ. ಜಾಕ್ ವೆಲ್ ಮತ್ತು ಪಂಪ್ ಹೌಸ್ ಕಾಮಗಾರಿ ಮುಗಿದಿರುವುದರಿಂದ ಈಗಾಗಲೇ ನೀರೆತ್ತುವ ಪ್ರಾಯೋಗಿಕ ಕಾರ್ಯ ಆರಂಭಿಸಿದೆ. ಪ್ರಸಕ್ತ ಮುಂಗಾರಿನಲ್ಲಿ 30 ಕೆರೆಗಳಿಗೆ ನೀರು ಪಂಪ್ ಮಾಡಿ ಭರ್ತಿ ಮಾಡಲಾಗುತ್ತದೆ ಎಂದರು.

 ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

error: Content is protected !!