ದ್ವಿಚಕ್ರ ವಾಹನ ರಿಪೇರಿ ಉಚಿತ ತರಬೇತಿಗೆ ಅರ್ಜಿ

ದಾವಣಗೆರೆ, ಜು. 7 – ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಹಾಗೂ ರುಡ್‍ಸೆಟ್ ಸಂಸ್ಥೆಯ ವತಿಯಿಂದ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗಾಗಿ ಆಗಸ್ಟ್ 21 ರಿಂದ ಗ್ರಾಮೀಣ  ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ್‌ ತಿಳಿಸಿದ್ದಾರೆ. 

error: Content is protected !!