ನಗರದಲ್ಲಿ ಇಂದು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪುರಸ್ಕಾರ

ಲಯನ್ಸ್ ಕ್ಲಬ್ ದಾವಣಗೆರೆ ಮತ್ತು ಸಂಕಲ್ಪ ಸೇವಾ ಫೌಂಡೇಷನ್ ಮತ್ತು ಶ್ರೀ ಕೊಂಡಜ್ಜಿ ಬಸಪ್ಪ ವಿದ್ಯಾವರ್ಧಕ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ   5, 6, 7ನೇ ತರಗತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ನಗರ ಮತ್ತು ಗ್ರಾಮಾಂತರ ಮಟ್ಟದಲ್ಲಿ ಪುರಸ್ಕಾರ ಸಮಾರಂಭವನ್ನು ಇಂದು ಬೆಳಗ್ಗೆ 11ಕ್ಕೆ ಲಯನ್ಸ್ ಕ್ಲಬ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ದಿನೇಶ್ ಕೆ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಿ. ಉಳುವಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪಿ. ಯಲ್ಲೇಶ್, ಬಿ. ಮಹಾಂತೇಶ್, ಬೆಳ್ಳೂಡಿ ಶಿವಕುಮಾರ್, ವಾಸುದೇವ್‌ ರಾಯ್ಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

error: Content is protected !!