ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಜು.18- ಕರ್ನಾಟಕದ ಮಾಜಿ ಸೈನಿಕರ ಹಾಗೂ ಹೊರ ರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಪದವಿ,   ಡಿಪ್ಲೋಮಾ,   ಜೆ.ಓ.ಸಿ  ವೃತ್ತಿಪರ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 30 ರೊಳಗಾಗಿ  ಸಲ್ಲಿಸಬೇಕು.   ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂ.ಸಂ: 08182-220925   ಸಂಪರ್ಕಿಸ ಬೇಕೆಂದು ಇಲಾಖೆ ಉಪನಿರ್ದೇಶಕ   ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.

error: Content is protected !!