ಬೆಂಗಳೂರಿನಲ್ಲಿ ನಾಳೆ ರಂಭಾಪುರಿ ಶ್ರೀಗಳ ಇಷ್ಟಲಿಂಗ ಪೂಜೆ

ಬೆಂಗಳೂರಿನಲ್ಲಿ ನಾಳೆ  ರಂಭಾಪುರಿ ಶ್ರೀಗಳ ಇಷ್ಟಲಿಂಗ ಪೂಜೆ

ಬೆಂಗಳೂರು, ಜು.  22- ವಿಜಯನಗರದ  ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ನಾಡಿದ್ದು ದಿನಾಂಕ 24ರಿಂದ 26ರ ವರೆಗೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆಯ ಜಿಲ್ಲಾ ಘಟಕದ ಆಶ್ರಯದಲ್ಲಿ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ, ಧರ್ಮೋತ್ತೇಜಕ ಸಂಗಮ ಸಮಾವೇಶ  ಹಮ್ಮಿಕೊಳ್ಳಲಾಗಿದೆ. 

24ರಂದು  ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ವನ್ನು  ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಚಿವರುಗಳಾದ ಎಸ್.ಬೋಸರಾಜು, ಈಶ್ವರ ಖಂಡ್ರೆ, ಕೆ.ವಿ.ಎಸ್.ಅಧ್ಯಕ್ಷ  ಬಿ.ಎಸ್. ಪರಮಶಿವಯ್ಯ, ನಿವೃತ್ತ ಐಪಿಎಸ್ ಅಧಿಕಾರಿ ರೇವಣಸಿದ್ಧಯ್ಯ, ಆರ್.ಆರ್.ಹಿರೇಮಠ ಆಗಮಿಸುವರು.  ಎಡೆಯೂರು ರೇಣುಕ ಶಿವಾಚಾರ್ಯ ಸ್ವಾಮಿಗಳು, ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ಗೌರಿಗದ್ದೆ ಅವಧೂತ ಆಶ್ರಮದ ವಿನಯ ಗುರೂಜಿ ಉಪಸ್ಥಿತರಿರಲಿದ್ದಾರೆ.

error: Content is protected !!