ಇಂದು ಆನ್‌ಲೈನ್‌ನಲ್ಲಿ ಶರಣ ಚಿಂತನಗೋಷ್ಠಿ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ  ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಇಂದು ಸಂಜೆ 7 ರಿಂದ 9 ರವರೆೆಗೆ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ ನಡೆಯಲಿದೆ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್ ಆಶಯ ನುಡಿಗಳನ್ನಾಡುವರು. `ಶರಣರ ವಚನ ಸಂವಿಧಾನ’ ಕುರಿತು ಯರಗಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಮಾತನಾಡಲಿದ್ದಾರೆ.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಗೂಗಲ್ ಮೀಟ್ ಜಾಯನಿಂಗ್ ಇನ್ಫೋ ವಿಡಿಯೋ ಕಾಲ್ ಲಿಂಕ್: https://meet.google.com/nbh-jeph-ftk

error: Content is protected !!