ಕೇಂದ್ರದ ಬಜೆಟ್‌ ; ಕನ್ನಡಿಗರ ಪಾಲಿಗೆ ಕರಾಳ ದಿನ : ಹೆಚ್‌. ಆಂಜನೇಯ ಕಿಡಿ

ಕೇಂದ್ರದ ಬಜೆಟ್‌ ; ಕನ್ನಡಿಗರ ಪಾಲಿಗೆ ಕರಾಳ ದಿನ : ಹೆಚ್‌. ಆಂಜನೇಯ ಕಿಡಿ

ಚಿತ್ರದುರ್ಗ, ಜು. 23 – ಈ ಹಿಂದೆ ಎಲ್ಲ ಬಜೆಟ್‌ಗಳಲ್ಲಿ ಕರ್ನಾಟಕದ ಹಿತಾಸಕ್ತಿಗೆ ಪೂರಕವಾಗಿ ಬೆರಳೆಣಿಕೆಯಷ್ಟು ಅಂಶಗಳಾದರೂ ಇರುತ್ತಿದ್ದವು. ಆದರೆ, ಈ ಬಾರಿಯ ಬಜೆಟ್ ಕನ್ನಡಿಗರ ಪಾಲಿಗೆ ಕರಾಳ ದಿನವಾಗಿದೆ ಎಂದು ಮಾಜಿ ಸಚಿವ ಹೆಚ್‌ ಆಂಜನೇಯ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಉತ್ತಮ ಆಡಳಿತ ನೀಡುತ್ತಿರುವ ಕಾರಣಕ್ಕೆ ಅಸೂಯೆಗೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರ, ರಾಜ್ಯದಲ್ಲಿನ ಅಭಿವೃದ್ಧಿ ಕಾರ್ಯಗಳ ಸ್ಥಗಿತಕ್ಕೆ ಮುಂದಾಗಿದೆ. ದ್ವೇಷದ ರಾಜಕಾರಣಕ್ಕೆ ಬಜೆಟ್‌ ಬಳಸಿಕೊಂಡಿದೆ ಎಂದು ಅವರು ಕಿಡಿಕಾರಿದ್ದಾರೆ.

ವಿಧಾನಸಭಾ ಚುನಾವಣೆ ಮುನ್ನ ನಿರ್ಮಲಾ ಸೀತಾರಾಮನ್  ಮಂಡಿಸಿದ್ದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಬಿಡುಗಡೆಗೆ ಯಾವುದೇ ರೀತಿ ಆಶಾಭಾವನೆ ಮೂಡಿಸ ದಿರುವುದು ವಂಚನೆ ನಡೆ ಆಗಿದೆ. ದಾವಣಗೆರೆ ಟು ತುಮಕೂರು ರೈಲು ಮಾರ್ಗ, ಕೈಗಾರಿಕೆಗಳ ಸ್ಥಾಪನೆ, ಭದ್ರಾ ಮೇಲ್ದಂಡೆ ಯೋಜನೆ ಹೀಗೆ ಅನೇಕ  ಯೋಜನೆಗಳಿಗೆ ಈ ಬಜೆಟ್ ಉತ್ತರ ಕೊಡಲಿದೆ ಎಂಬ ನಿರೀಕ್ಷೆ ಹುಸಿ ಆಗಿದೆ. ಒಟ್ಟಾರೆ ರಾಜ್ಯದ ಪಾಲಿಗೆ ಸಣ್ಣ ಬೆಳಕು ಕೂಡ ಆಗದ ಈ ಬಜೆಟ್ ಕತ್ತಲಿಗೆ ದೂಡಿದೆ ಎಂದು ಅವರು ಹೇಳಿದ್ದಾರೆ.

ಚುನಾವಣೆ ಸಂದರ್ಭ ಚಂದ್ರಲೋಕವನ್ನೇ
ತರುತ್ತೇವೆ ಎಂದು ಹೇಳುವ ಬಿಜೆಪಿ ನಾಯಕರ ಮಾತು ಜನರನ್ನು‌ ಮೋಸದ ಜಾಲಕ್ಕೆ ತಳ್ಳುವ ಕುತಂತ್ರವಾಗಿದೆ ಎಂದು ಆಂಜನೇಯ ಹೇಳಿದ್ದಾರೆ. 

error: Content is protected !!