ತ್ಯಾಗ ಜೀವಿಗಳು ಮಾತ್ರ ನೆನಪಿನಲ್ಲಿರುವರು

ತ್ಯಾಗ ಜೀವಿಗಳು ಮಾತ್ರ ನೆನಪಿನಲ್ಲಿರುವರು

ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ, ಜು. 24 – ಸರ್ಕಾರ ಅನೇಕ ಮಹನೀಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ ಮಾಡಿದವರು ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯವೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. 

 ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಹಡಪದ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಮಾ ರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬುದ್ದ, ಬಸವಾದಿ ಶರಣರು ಹಾಗೂ ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಜನಮಾಸನದಲ್ಲಿ ಉಳಿದಿದ್ದಾರೆ. ಅವರು ಕಾಯಕವೇ ಕೈಲಾಸ ಎಂದು ಜನರ ಸೇವೆ ಮಾಡಿದ್ದರಿಂದ ಗೌರವ ಸದಾಕಾಲ ಇರುತ್ತದೆ. 

ಹಡಪದ ಅಪ್ಪಣ್ಣನವರು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಅವರ ನಿಸ್ವಾರ್ಥ ಸೇವೆ, ತ್ಯಾಗದಿಂದ ಇಂದು ಎಲ್ಲರ ಮಧ್ಯೆ ಇದ್ದಾರೆ, ಇಂತಹ ವ್ಯಕ್ತಿಗಳನ್ನು ಮಾತ್ರ ನೆನೆಯಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ್, ಶ್ರೀ ಬಸವರಾಜೇಂದ್ರ ಶರಣರು, ಶಿವ ಶರಣ ಹಡಪದ ಸಮಾಜದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

error: Content is protected !!