ನಾಳೆ ಬಸವ ಬಳಗದಿಂದ ಸಂವಾದ

ದಾವಣಗೆರೆ, ಜು. 24- ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇದೇ ದಿನಾಂಕ 26 ರಂದು ಸಂಜೆ 5.30 ಕ್ಕೆ ಸರಸ್ವತಿ ನಗರದ ಬಸವ ಬಳಗದ ಆವರಣದಲ್ಲಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಬಳಗದ ಕಾರ್ಯದರ್ಶಿ ವೀಣಾ ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಸವ ಬಳಗದ ಅಧ್ಯಕ್ಷ ಹುಚ್ಚಪ್ಪ ಮಾಸ್ತರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಆಗಮಿಸಲಿದ್ದಾರೆಂದರು. ಕರುಣಾ ಜೀವ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಶಿವನಕೆರೆ ಬಸವಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ. ಸಿದ್ಧರಾಮಯ್ಯ `ಲಿಂಗಾಯತ ಧರ್ಮ ಸಮಕಾಲೀನ ಅವಶ್ಯಕತೆ’ ವಿಷಯ ಕುರಿತು ಉಪನ್ಯಾಸ ನೀಡುವ ಮೂಲಕ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. `ಬಸವಣ್ಣ ಸಾಂಸ್ಕೃ ತಿಕ ನಾಯಕ ಏಕೆ?’ ವಿಷಯ ಕುರಿತು ವಿಜಯಪುರದ ಶರಣ ಚಿಂತಕ ಡಾ.ಜೆ.ಎಸ್. ಪಾಟೀಲ್ ಉಪನ್ಯಾಸ ನೀಡಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ್, ಆವರಗೆರೆ ರುದ್ರಮುನಿ, ಮರುಳಸಿದ್ಧಯ್ಯ ಉಪಸ್ಥಿತರಿದ್ದರು. 

error: Content is protected !!