ಭಾರತೀಯ ರೈತ ಒಕ್ಕೂಟದಿಂದ ಆಗಸ್ಟ್ 3ರಂದು ಭದ್ರೆಗೆ ಬಾಗಿನ

ದಾವಣಗೆರೆ, ಜು. 30 – ಭಾರತೀಯ ರೈತ ಒಕ್ಕೂಟದಿಂದ ಆಗಸ್ಟ್ 3ರ ಶನಿವಾರ ಬೆಳಿಗ್ಗೆ 11.30ಕ್ಕೆ ತುಂಬಿರುವ ಭದ್ರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ರೈತ ಒಕ್ಕೂಟದ ಜಿಲ್ಲಾಧ್ಯಕ್ಷ ಹೆಚ್.ಆರ್. ಲಿಂಗರಾಜ್ ಶಾಮನೂರು ಅವರು ತಿಳಿಸಿದ್ದಾರೆ. 

ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ನೀರಾವರಿ ತಜ್ಞ ಪ್ರೊ. ಸಿ.ನರಸಿಂಹಪ್ಪ  ಅವರೂ ಸೇರಿದಂತೆ ಸಚಿವರು, ಮಾಜಿ ಸಚಿವರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಅವರು ವಿವರಿಸಿದ್ದಾರೆ.

error: Content is protected !!