ವಾಲಿಬಾಲ್ ಪಂದ್ಯ : ವಿಶ್ವಚೇತನ ಪ್ರಥಮ

ವಾಲಿಬಾಲ್ ಪಂದ್ಯ : ವಿಶ್ವಚೇತನ ಪ್ರಥಮ

ದಾವಣಗರೆ, ಆ. 21 – ನಗರದ ವಿಶ್ವಚೇತನ ವಿದ್ಯಾನಿಕೇತನ ವಸತಿಯುತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ, ಬಾಲಕಿಯರ ವಾಲಿಬಾಲ್‌ ಪಂದ್ಯಾವಳಿಯಲ್ಲಿ ವಿಜೇತರಾಗಿ ದಾವಣಗೆರೆ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ವಿಜಯಲಕ್ಷ್ಮಿ ವೀರಮಾಚನೇನಿ, ಪ್ರಾಂಶುಪಾಲ, ದೈಹಿಕ ಶಿಕ್ಷಕರಾದ ಚೌಡಪ್ಪ, ನಟರಾಜ ಅವರು ಮಕ್ಕಳನ್ನು ಅಭಿನಂದಿಸಿದ್ದಾರೆ.

error: Content is protected !!