ವಿಕಲಚೇತನ ಪತ್ರಿಕಾ ವಿತರಕರಿಗೆ ಸನ್ಮಾನ

ದಾವಣಗೆರೆ, ಆ. 22- ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಕಾರ್ಯನಿರತ ಪತ್ರಿಕಾ ವಿತರಕರ/ ಹಂಚಿಕೆದಾರರ ಸಂಘ, ಚಿತ್ರದುರ್ಗ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 8 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ 4 ನೇ ರಾಜ್ಯ ಸಮ್ಮೇಳನದಲ್ಲಿ ವಿಕಲ ಚೇತನ ಪತ್ರಿಕಾ ವಿತರಕರನ್ನು ಸನ್ಮಾನಿಸಲಾಗುವುದು.

ರಾಜ್ಯದ ಯಾವುದೇ ನಗರ ಜಿಲ್ಲೆ ಹಾಗೂ ತಾಲ್ಲೂಕು ವಿಕಲಚೇತನ ವಿತರಕರು ತಮ್ಮ ಪರಿಪೂರ್ಣ ಮಾಹಿತಿಗಳೊಂದಿಗೆ ಇದೇ ದಿನಾಂಕ 25 ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ, ಎ.ಎನ್. ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಜಿಲ್ಲಾ ಸಂಘ (9886912487) ಅವರನ್ನು ಸಂಪರ್ಕಿಸಬಹುದಾಗಿದೆ.

error: Content is protected !!