ಅಹಿಂದ ಒಕ್ಕೂಟದಿಂದ ಇಂದು ಪ್ರತಿಭಟನೆ

ಹೊನ್ನಾಳಿ, ಆ.22- ಹೊನ್ನಾಳಿ, ನ್ಯಾಮತಿ ಅವಳಿ ತಾಲ್ಲೂಕು ಅಹಿಂದ ಒಕ್ಕೂಟ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ನಾಳೆ ದಿನಾಂಕ 23ರ ಶುಕ್ರವಾರ ಬೆಳಿಗ್ಗೆ 11ಕ್ಕೆ `ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ ಎಂಬ ಎಚ್ಚರಿಕೆ ಸಂದೇಶದೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ನೆಲಹೊನ್ನೆ ಮೋಹನ್ ಹಾಗೂ ದಲಿತ ಮುಖಂಡ ದಿಡಗೂರು ತಮ್ಮಣ್ಣ ಜಂಟಿಯಾಗಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವಳಿ ತಾಲ್ಲೂಕಿನ ಎಲ್ಲಾ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. 

ತಾಲ್ಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಶಿವಾನಂದ್, ತಾಲ್ಲೂಕು ಮೈನಾರಿಟಿ ಕಮಿಟಿ ಅಧ್ಯಕ್ಷ ಚೀಲೂರು ವಾಜೀದ್, ಜೈನ್ ಸಮಾಜದ ಮುಖಂಡ ಕೆಪಿಸಿಸಿ ಯುವ ವಕ್ತಾರ ದರ್ಶನ್ ಬಳ್ಳೇಶ್ವರ್ ಮಾತನಾಡಿದರು.

ಬಂಜಾರ್ ಸಮಾಜದ ಮುಖಂಡ ವಸಂತನಾಯ್ಕ, ಛಲವಾದಿ ಸಮಾಜದ ಕುರುವ ಮಂಜುನಾಥ್, ರುದ್ರೇಶ್ ಕೊಡತಾಳ್, ಕುರುಬ ಸಮಾಜದ ಖಜಾಂಚಿ ಎಚ್.ಎ. ನರಸಿಂಹಪ್ಪ, ಕೆ. ಪುಟ್ಟಪ್ಪ, ಎಚ್.ಡಿ. ವಿಜೇಂದ್ರಪ್ಪ, ಕುಂಬಳೂರು ವಾಗೀಶ್, ಕೃಷ್ಣಪ್ಪ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

error: Content is protected !!