ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ, ಆ. 22 – ಕೃಷಿ ಇಲಾಖೆ ವತಿಯಿಂದ  ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2024-25ನೇ ಸಾಲಿನ ಕೃಷಿ ಪ್ರಶಸ್ತಿಗೆ ರೈತ ಬಾಂಧವರಿಂದ ಹಾಗೂ ಪ್ರತ್ಯೇಕವಾಗಿ ರೈತ ಮಹಿಳೆಯರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟಕ್ಕೆ ಮುಸುಕಿನ ಜೋಳ (ಮಳೆಯಾಶ್ರಿತ) ಬೆಳೆಯನ್ನು ಮತ್ತು ತಾಲ್ಲೂಕು ಮಟ್ಟಕ್ಕೆ ದಾವಣಗೆರೆ, ಚನ್ನಗಿರಿ, ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕುಗಳಿಗೆ ಮುಸುಕಿನಜೋಳ (ಮಳೆಯಾಶ್ರಿತ) ಬೆಳೆಯನ್ನು ನಿಗದಿಪಡಿ ಸಲಾಗಿದೆ. ಆಸಕ್ತ ರೈತರು ಮುಂಗಾರು ಹಂಗಾಮಿಗೆ ಇದೇ 31 ಹಾಗೂ ಹಿಂಗಾರು ಹಂಗಾಮಿಗೆ ನ.30 ರೊಳಗಾಗಿ ಕೃಷಿ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸಲು ದಾವಣಗೆರೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!