ಹರಿಹರದಲ್ಲಿ ಇಂದು ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ

ಹರಿಹರದಲ್ಲಿ ಇಂದು ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ

ಹೊಸಭರಂಪುರ ಬಡಾವಣೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಇಂದು ಮಧ್ಯಾಹ್ನ 12.15ಕ್ಕೆ ಶ್ರೀ ಲಕ್ಷ್ಮಿವೆಂಕಟೇಶ್ವರ ಕಲ್ಯಾಣೋತ್ಸವ ನಡೆಯಲಿದೆ. ಬೆಳಗ್ಗೆ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಗೆ ಮಹಾ ರುದ್ರಾಭಿಷೇಕ, ಅಲಂಕಾರ ಮಹಾಮಂಗಳಾರತಿ ನಡೆದ ನಂತರ ರಥೋತ್ಸವದ ಕಲ್ಯಾಣೋತ್ಸವ ಜರುಗಲಿದೆ.

ಮಧ್ಯಾಹ್ನ ಪ್ರಸಾದ ವಿನಿಯೋಗ ನಡೆಯಲಿದ್ದು, ಸಂಜೆ 5ರಿಂದ ಶ್ರೀ ರಾಘವೇಂದ್ರಸ್ವಾಮಿ ಭಜನಾ ಮಂಡಳಿ, ಮಧ್ವ ಸಂಘ ಕೋಟೆ ಇವರಿಂದ ಭಜನೆ ಕಾರ್ಯಕ್ರಮ ನೆರವೇರಲಿದೆ ಎಂದು ದೇವಸ್ಥಾನ ಸಮಿತಿಯ ಮುಖಂಡ ಲಕ್ಷ್ಮಣ್ ತಿಳಿಸಿದ್ದಾರೆ.

error: Content is protected !!