ಜಿಲ್ಲೆಗೆ ಇಂದು ಉಸ್ತುವಾರಿ ಕಾರ್ಯದರ್ಶಿಗಳ ಭೇಟಿ

ಸರ್ಕಾರದ ಕಾರ್ಯದರ್ಶಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ಅವರು ಇಂದು ಸೋಮವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 12ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಜಿ.ಪಂ. ಸಿಇಒ ಸುರೇಶ್ ಬಿ.ಇಟ್ನಾಳ್ ತಿಳಿಸಿದ್ದಾರೆ.

error: Content is protected !!