ನಗರದಲ್ಲಿ ನಾಳೆ ವರದಿಗಾರರ ಕೂಟದ ಪದಗ್ರಹಣ

ದಾವಣಗೆರೆ, ಆ. 29- ವರದಿಗಾರರ ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ನಾಡಿದ್ದು ದಿನಾಂಕ 31ರ ಶನಿವಾರ ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಕೂಟದ ಗೌರವಾಧ್ಯಕ್ಷ ಬಿ.ಎನ್. ಮಲ್ಲೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಎಸ್. ಬಡದಾಳ್ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕೂಟದ ವೆಬ್‌ಸೈಟ್‌ ಉದ್ಘಾಟನೆ ಮಾಡಲಿದ್ದು, ಅತಿಥಿಗಳಾಗಿ ಶಾಸಕರಾದ ಬಿ.ಪಿ ಹರೀಶ್, ಕೆ.ಎಸ್. ಬಸವಂತಪ್ಪ, ಕೂಟದ ನಿಕಟ ಪೂರ್ವ ಅಧ್ಯಕ್ಷ ಕೆ. ಏಕಾಂತಪ್ಪ ಭಾಗವಹಿಸಲಿದ್ದಾರೆ.

ವಾರ್ಷಿಕ ಮಾಧ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಪ್ರದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತರನ್ನು ಗುರುತಿಸಿ ಜೀವಮಾನ ಸಾಧನೆಗಾಗಿ ಗೌರವ ಸನ್ಮಾನವನ್ನು ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಾಡಲಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಕೂಟದ ಅಧ್ಯಕ್ಷ ನಾಗರಾಜ್ ಎಸ್. ಬಡದಾಳ್, ಪ್ರಧಾನ ಕಾರ್ಯದರ್ಶಿ ಎಂ.ವೈ. ಸತೀಶ್, ಖಜಾಂಚಿ ಪವನ್ ಕುಮಾರ್ ಐರಣಿ, ಕಾರ್ಯದರ್ಶಿ ಸಿಕಂದರ್ ಉಪಸ್ಥಿತರಿದ್ದರು. 

error: Content is protected !!