ಕಲುಷಿತ ನೀರು ಸೇವಿಸಿ 22ಕ್ಕೂ ಹೆಚ್ಚು ಜನ ಅಸ್ವಸ್ಥ

ದಾವಣಗೆರೆ, ಆ.29- ಕಲುಷಿತ‌ ನೀರು‌ ಸೇವಿಸಿ 22 ಕ್ಕೂ ಹೆಚ್ಚು ಜನರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ‌ ಜೋಳದಾಳ್ ಗ್ರಾಮದಲ್ಲಿ  ಗುರುವಾರ ನಡೆದಿದೆ.  ಅಸ್ವಸ್ಥಗೊಂ ಡವರನ್ನು ಶಿವಮೊಗ್ಗದ ಮೆಗ್ಗಾನ್, ಭದ್ರಾವತಿ, ಚನ್ನಗಿರಿ ತಾಲ್ಲೂಕು ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. 

ನೀರು ಪೂರೈಕೆಯಲ್ಲಿ ಆದ ವ್ಯತ್ಯಾಸದಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ, ಗ್ರಾಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಸೇರಿದಂತೆ‌ ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

error: Content is protected !!