ನಗರದಲ್ಲಿ ಇಂದು ಶ್ರೀ ಸತ್ಯನಾರಾಯಣ ಸ್ವಾಮಿ ವ್ರತ

ನಗರದಲ್ಲಿ ಇಂದು ಶ್ರೀ ಸತ್ಯನಾರಾಯಣ ಸ್ವಾಮಿ ವ್ರತ

1008 ಶ್ರೀ ಸತ್ಯನಾರಾಯಣ ಸ್ವಾಮಿ ವ್ರತವನ್ನು ಎಸ್.ಕೆ.ಪಿ. ರಸ್ತೆಯಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಏರ್ಪಡಿಸಲಾಗಿದೆ ಎಂದು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್ ತಿಳಿಸಿದ್ದಾರೆ. ಈ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7 ರಿಂದ ಶ್ರೀ ಗಣಪತಿ ಸ್ಮರಣೆ, ಶ್ರೀ ಜನಾರ್ಧನ ಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ, ಅಲಂಕಾರ, ಬೆಳಿಗ್ಗೆ 8.45 ರಿಂದ ಶ್ರೀ ಮಹಾಗಣಪತಿ – ಶ್ರೀ ನವಗ್ರಹ ಪೂಜೆ, ಶ್ರೀ ಸತ್ಯನಾರಾಯಣ ವ್ರತ ಪೂಜೆ, ಸಂಜೆ 7 ರಿಂದ ರಥಾರೋಹಣ, ಉಯ್ಯಾಲೆ ಸೇವೆ, ಜರುಗಲಿದೆ.

ಸರ್ವ ಸದಸ್ಯರ ಸಭೆ : ಇದೇ ಸಂದರ್ಭದಲ್ಲಿ ಸಂಜೆ 5 ಗಂಟೆಗೆ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ಸರ್ವ ಸದಸ್ಯರ ಸಭೆಯು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕಾಸಲ್ ಎಸ್. ವಿಠಲ್ ಶ್ರೀಮತಿ ಸುನಂದಮ್ಮ ಕಲ್ಯಾಣ ಮಂಟಪದಲ್ಲಿ ಏರ್ಪಾಡಾಗಿದೆ.

error: Content is protected !!