ನಗರದಲ್ಲಿ ಇಂದು ಅನ್ನ ಸಂತರ್ಪಣೆ

ನಗರದಲ್ಲಿ ಇಂದು ಅನ್ನ ಸಂತರ್ಪಣೆ

ಕೆಟಿಜೆ ನಗರದ 3ನೇ ಮೇನ್, 17ನೇ ಕ್ರಾಸ್‌ನಲ್ಲಿ ಶ್ರೀ ಓಂಕಾರ ಯುವಕರ ಸಂಘದಿಂದ ಏರ್ಪಡಿಸಿ ರುವ ಗಣೇಶ ಮಹೋತ್ಸವದ ಪ್ರಯುಕ್ತ ಇಂದು ಮಧ್ಯಾಹ್ನ 12.30 ರಿಂದ ಅನ್ನ ಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿದೆ.

18ರ ಬುಧವಾರ ಸಂಜೆ 6 ಗಂಟೆಗೆ ಸಾಂಸ್ಕೃತಿಕ  ಕಾರ್ಯಕ್ರಮ, ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 90% ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ರಾಜ್ಯಮಟ್ಟ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

19ರ ಗುರುವಾರ ಸಂಜೆ 4 ಗಂಟೆಗೆ ಬೃಹತ್ ಶೋಭಾಯಾತ್ರೆ ಯ ಮೂಲಕ ಗಣಪತಿ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

error: Content is protected !!