ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ

ಕಾಂಗ್ರೆಸ್ ಮೌನ ಪ್ರತಿಭಟನೆ

ದಾವಣಗೆರೆ, ಸೆ. 26- ಮುಖ್ಯಮಂತ್ರಿ ಸಿದ್ಧರಾ ಮಯ್ಯ ಅವರನ್ನು ರಾಜಕೀಯವಾಗಿ ಕೊನೆಗಾಣಿ ಸಲು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಶೋಷಿತ ಸಮುದಾಯದ ಒಕ್ಕೂಟದ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ಮೌನ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗದಿದ್ದರೂ, ಏನೂ ತಪ್ಪು ಮಾಡದಿದ್ದರೂ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ್ಯ ರೂಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಮನವಿ ಮಾಡಿದರು.

ನ್ಯಾಯಾಲಯ ಉತ್ತಮ ತೀರ್ಪು ನೀಡುವ ವಿಶ್ವಾಸ ಇತ್ತು. ರಾಜಕೀಯದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲದೇ ಪ್ರಾಮಾಣಿಕ ಆಡಳಿತವನ್ನು ಸಿದ್ಧರಾಮಯ್ಯ ನೀಡುತ್ತಾ ಬಂದಿದ್ದಾರೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ದಕ್ಷ ಆಡಳಿತಗಾರರು ಎಂಬ ಪ್ರೀತಿಗೆ ಪಾತ್ರರಾಗಿದ್ದಾರೆ. ಆದರೆ ಬಿಜೆಪಿಯವರು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿ, ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಬೇಕೆಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರೇ ಈ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಅವರ ಬೆಂಬಲಕ್ಕೆ ಇಡೀ ರಾಜ್ಯದ ಜನರಿದ್ದಾರೆ. 136 ಶಾಸಕರು ಅವರ ಜೊತೆಗಿದ್ದಾರೆ. ರಾಜ್ಯಪಾಲರ ಕಚೇರಿ ಇದೀಗ ಬಿಜೆಪಿಯವರ ಪ್ರಧಾನ ಕಚೇರಿಯಾಗಿದೆ ಎಂದು ಲೇವಡಿ ಮಾಡಿದರು.

ಪ್ರತಿಭಟನೆಯಲ್ಲಿ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ಮುಖಂಡರಾದ ಬಿ. ವೀರಣ್ಣ, ಕೆ.ಜಿ. ಶಿವಕುಮಾರ್, ಎಲ್.ಡಿ. ಗೋಣೆಪ್ಪ, ಎಸ್. ವೆಂಕಟೇಶ್, ಸೈಯದ್ ಚಾರ್ಲಿ, ಬಿ.ಹೆಚ್.ಪರಶುರಾಮಪ್ಪ, ಕವಿತಾ ಚಂದ್ರಶೇಖರ್, ಎಸ್. ಮಲ್ಲಿಕಾರ್ಜುನ್, ಎಸ್.ಎಲ್. ಆನಂದಪ್ಪ, ಕೋಗುಂಡೆ ಸುರೇಶ್, ಕಾವ್ಯ, ಮಂಜುನಾಥ್ ಇಟ್ಟಿಗುಡಿ, ಎಸ್.ಎಸ್. ಗಿರೀಶ್, ಕೆ.ಎನ್. ಮಂಜುನಾಥ, ಹೆಚ್. ಜಯಣ್ಣ, ನಂಜ್ಯಾನಾಯ್ಕ, ಆದೀಲ್ ಖಾನ್, ರವೀಂದ್ರ, ಜಯಶ್ರೀ, ಡಿ. ಶಿವಕುಮಾರ್, ಆರ್. ಪ್ರತಾಪ್, ಲಿಯಾಖತ್ ಅಲಿ, ರೇವಣಸಿದ್ಧಪ್ಪ, ಜಿ.ಸಿ.ನಿಂಗಪ್ಪ, ನಿಂಗರಾಜ್ ಮತ್ತಿತರರು ಭಾಗವಹಿಸಿದ್ದರು.

error: Content is protected !!