ನಾಳೆ ಹಾನಗಲ್ ಕುಮಾರ ಮಹಾ ಶಿವಯೋಗಿಗಳ ಜಯಂತ್ಯುತ್ಸವ

ದಾವಣಗೆರೆ, ಸೆ. 27- ಅಖಿಲ ಕರ್ನಾಟಕ ಶ್ರೀ ಗುರು ಕುಮಾರೇಶ್ವರ ಅಂಧರ ಸಂಗೀತ ಕಲಾವಿದರ ಸಂಘದ ವತಿಯಿಂದ ನಾಡಿದ್ದು ದಿನಾಂಕ 29 ರಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಡಾ ಕ್ರಾಸ್ ಬಳಿ ಇವರು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಹಾನಗಲ್ ಶ್ರೀ ಕುಮಾರ ಮಹಾ ಶಿವಯೋಗಿಗಳವರ 157 ನೇ ಜಯಂತ್ಯುತ್ಸವ,ತುಲಾಭಾರ, ಸ್ವಾಮಿ ಸುಕುಮಾರ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಾಜ್‌ಕುಮಾರ್ ಮುಲಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಿಗ್ಗೆ 7 ರಿಂದ 9 ರವರೆಗೆ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಗದಗದ ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಡಾ. ಕಲ್ಲಯ್ಯಜ್ಜ ಸಾನ್ನಿಧ್ಯ ವಹಿಸಲಿದ್ದಾರೆಂದರು.

ಪುಣ್ಯಾಶ್ರಮದ ಅಧ್ಯಕ್ಷ ಡಾ. ಅಥಣಿ ಎಸ್. ವೀರಣ್ಣ ಅಧ್ಯಕ್ಷತೆ ವಹಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆರ್.ವಿ. ಸಂಗಮೇಶ್ವರ ಗವಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಹೆಚ್. ಶಿವಯೋಗಿಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಪುಣ್ಯಾಶ್ರಮದ ಉಪಾಧ್ಯಕ್ಷ ಎ.ಎಸ್. ಮೃತ್ಯುಂಜಯ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಶೋಕ್, ಸಂತೋಷ್ ಬಾಣಿ, ಮಂಜುನಾಥ್, ಅಂಬರೀಶ್ ಸುತಾರ್ ಮತ್ತಿತರರಿದ್ದರು. 

error: Content is protected !!