ನಗರದಲ್ಲಿ ಇಂದು `ಗುರು ಚೇತನ’, `ಗುರು ಶ್ರೇಷ್ಠ’ ಪ್ರಶಸ್ತಿ ಪ್ರದಾನ

ಶಿಕ್ಷಣ ತಜ್ಞ ಡಾ.ಹೆಚ್.ವಿ. ವಾಮದೇವಪ್ಪ ಚಾರಿಟಬಲ್ ಮತ್ತು ಎಜುಕೇಶನಲ್ ಟ್ರಸ್ಟ್ ವತಿಯಿಂದ ಇಂದು ಬೆಳಿಗ್ಗೆ 10.30 ಕ್ಕೆ ಕುವೆಂಪು ಕನ್ನಡ ಭವನದಲ್ಲಿ `ಗುರು ಚೇತನ’ ಹಾಗೂ `ಗುರು ಶ್ರೇಷ್ಠ’ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

ಶಿಕ್ಷಣ ತಜ್ಞ ಬೆಂಗಳೂರಿನ ಡಾ. ಕೆ.ಎಸ್. ಅನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ, ಡಾ. ಹೆಚ್. ಮುದ್ದು ಮಲ್ಲೇಶ್ ಮತ್ತಿತರೆ ಗಣ್ಯರು ಆಗಮಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಪ್ರೊ.ಹೆಚ್.ಎಸ್. ಶಾಂತವೀರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. 

ಗುರುಚೇತನ ಪ್ರಶಸ್ತಿಗೆ ಭಾಜನರಾದ ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಡಾ.ಜಿ.ವಿ. ಹರಿಪ್ರಸಾದ್ ಅವರಿಗೆ ಪ್ರಶಸ್ತಿ 10 ಸಾವಿರ ರೂ. ನಗದು, ಪುರಸ್ಕಾರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು.

`ಗುರು ಶ್ರೇಷ್ಠ’ ಪ್ರಶಸ್ತಿಗೆ ಭಾಜನರಾದ  ಹರಿಹರ ತಾಲ್ಲೂಕು ಗುಡ್ಡದ ಕೊಮಾರನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಎಂ. ರಮೇಶ ಅವರಿಗೆ ಐದು ಸಾವಿರ ನಗದು, ಪ್ರಶಸ್ತಿ ಪುರಸ್ಕಾರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು.

error: Content is protected !!