ಎಐಡಿಎಸ್‌ಓ ಕಾರ್ಯಕರ್ತರು, ವಿದ್ಯಾರ್ಥಿಗಳಿಂದ ಬೃಹತ್ ಬೈಕ್ ರ‍್ಯಾಲಿ

ಎಐಡಿಎಸ್‌ಓ ಕಾರ್ಯಕರ್ತರು, ವಿದ್ಯಾರ್ಥಿಗಳಿಂದ  ಬೃಹತ್ ಬೈಕ್ ರ‍್ಯಾಲಿ

ದಾವಣಗೆರೆ, ಅ. 15- ಎಐಡಿಎಸ್‌ಓ ನೇತೃತ್ವದಲ್ಲಿ ನಾಳೆ ದಿನಾಂಕ 16 ರ ದಾವಣಗೆರೆ ಬಂದ್ ಗೆ ಬೆಂಬಲ ನೀಡಿರುವ ಹಲವು ಸಂಘಟನೆಗಳ ಮುಖಂಡರು – ಕಾರ್ಯಕರ್ತರು ಹಾಗೂ ಹಲವಾರು ಕಾಲೇಜುಗಳ ವಿದ್ಯಾರ್ಥಿಗಳು ಬೃಹತ್ ಬೈಕ್ ರ‍್ಯಾಲಿ  ನಡೆಸಿದರು. 

ಯುಬಿಡಿಟಿ ಕಾಲೇಜಿನ ಮುಂಭಾಗದಿಂದ ಪ್ರಾರಂಭವಾದ ಬೈಕ್ ರಾಲಿ ಪುನಃ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಬೆಂಬಲ ವ್ಯಕ್ತಪಡಿಸಿ, ಮುಖ್ಯಮಂತ್ರಿಗಳಿಗೆ ನೀಡುವ ಮನವಿ ಪತ್ರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರಿಗೆ ನೀಡಿದರು.

ನಾಡಿನ ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿರುವ ಹೆಮ್ಮೆಯ ಯುಬಿಡಿಟಿ ಕಾಲೇಜನ್ನು ಉಳಿಸಲು, ಶೇ.50ರಷ್ಟು ಪೇಮೆಂಟ್ ಕೋಟಾ ರದ್ದು ಪಡಿಸಲು, ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವ ಯುಬಿಡಿಟಿಯ ಅಭಿವೃದ್ಧಿಗೆ ಅನುದಾನ ನೀಡಲು ಆಗ್ರಹಿಸಲಾಯಿತು.

ಬೈಕ್ ರಾಲಿಯನ್ನು ಮಳೆಯ ನಡುವೆಯೂ ಅತ್ಯಂತ ಉತ್ಸಾಹದಿಂದ ನಗರದ ಎಲ್ಲಾ ಪ್ರಮುಖ ಬೀದಿಗಳಲ್ಲಿ ನಡೆಸಿ ಜಯದೇವ ವೃತ್ತದಲ್ಲಿ ಮುಕ್ತಾಯಗೊಳಿಸಲಾಯಿತು.

error: Content is protected !!