ದಾವಣಗೆರೆಯಲ್ಲಿ ಬಿಡಿಎ ಮಾದರಿ ಮನೆ ನಿರ್ಮಾಣ

ದಾವಣಗೆರೆಯಲ್ಲಿ ಬಿಡಿಎ ಮಾದರಿ ಮನೆ ನಿರ್ಮಾಣ

ದಾವಣಗೆರೆ, ಅ. 15- ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಮನೆಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸೂಚಿಸಿದರು.

ದಾವಣಗೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಮ್ಮಿಕೊಂಡಿದ್ದ ಸಭೆಯ ನಂತರ ಸಚಿವರು ಮಾಧ್ಯಮದವರಿಗೆ ಮಾಹಿತಿ ನೀಡಿದರು. 

ದಾವಣಗೆರೆ, ಹರಿಹರ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳು ಅಭಿವೃದ್ಧಿಯತ್ತ ಸಾಗಬೇಕು. ಈ ನಿಟ್ಟಿನಲ್ಲಿ ಮುಂದಿನ ಪ್ರಕ್ರಿಯೆಗೆ ಸಭೆ ನಡೆಸಲಾಯಿತು. ಏರಿಯಾಗಳ ಆಧಾರದಲ್ಲಿ ದರ ನಿಗಧಿ ಪಡಿಸಿ ಡೆವಲಪ್‌ಮೆಂಟ್ ಅಥಾರಿಟಿಯಿಂದ ಹೊಸ ಲೇಔಟ್, ನಿವೇಶನ ಹಾಗೂ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. 

ದಾವಣಗೆರೆ ದಕ್ಷಿಣ ಹಾಗೂ ಉತ್ತರ ಭಾಗಗಳಲ್ಲಿ ಹೊಸ ಲೇಔಟ್‌ಗಳು ನಿರ್ಮಾಣವಾಗಿವೆ. ಪಾರದರ್ಶಕವಾಗಿ ಇ-ಸ್ವತ್ತು ನೀಡಬೇಕು. ಇ-ಸ್ವತ್ತು ಸಹ ಆನ್‌ಲೈನ್ ಮಾಡಲು ನಿರ್ಧರಿಸಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಾವಣಗೆರೆ ಜಿಲ್ಲೆ ಉತ್ತಮವಾಗಿದೆ.

2003-2008 ರ ಅವಧಿಯಲ್ಲಾದ ಕಾಮಗಾರಿಗಳಿಂದ ಇಂದು ದಾವಣಗೆರೆ ಜಿಲ್ಲೆಗೆ ಉತ್ತಮ ಹೆಸರು ಬಂದಿದೆ. ವಿನೋಬನಗರ, ಎಲ್ಲಮ್ಮನಗರ, ಜಾಲಿನಗರ ಸೇರಿದಂತೆ ಹತ್ತಾರು ಬಡಾವಣೆಗಳಿಂದ 40 ಸಾವಿರ ಅರ್ಜಿಗಳನ್ನು ಅಕ್ರಮ-ಸಕ್ರಮ‌ ಮಾಡಲಾಗಿದೆ. ಸಾವಿರಾರು ರೂಪಾಯಿ ಇದ್ದ ಭೂಮಿ ಬೆಲೆ ಕೋಟಿಗೆ ತಲುಪಿದೆ. ನಮ್ಮ ಅವಧಿಯಲ್ಲಾದ ಕೆಲಸಗಳನ್ನು ಜನರು ಇಂದಿಗೂ ಸ್ಮರಿಸುತ್ತಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್,  ದೂಡಾ ಅಧ್ಯಕ್ಷ ದಿನೇಶ್‌ ಕೆ.ಶೆಟ್ಟಿ, ಮೇಯರ್ ಕೆ.ಚಮನ್‌ಸಾಬ್, ಉಪಮೇಯರ್ ಸೋಗಿ ಶಾಂತಕುಮಾರ್, ದೂಡಾ ಆಯುಕ್ತರು ಸದಸ್ಯರುಗಳು ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!