ಸರ್ಕಾರದ ಪತನಕ್ಕೆ ಸಾವಿರ ಕೋಟಿ ರೂ. : ಯತ್ನಾಳ್ ವಿರುದ್ಧ ಎಫ್.ಐ.ಆರ್

ಸರ್ಕಾರದ ಪತನಕ್ಕೆ ಸಾವಿರ ಕೋಟಿ ರೂ. : ಯತ್ನಾಳ್ ವಿರುದ್ಧ ಎಫ್.ಐ.ಆರ್

ದಾವಣಗೆರೆ, ಅ. 17 –  ರಾಜ್ಯ ಸರ್ಕಾರದ ಪತನಕ್ಕೆ ನಾಯಕರೊಬ್ಬರು ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂಬ ಆರೋಪ ಮಾಡಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಇಲ್ಲಿನ ಗಾಂಧಿನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ನಗರಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಯತ್ನಾಳ್ ಅವರು, ಸರ್ಕಾರದ ಪತನಕ್ಕೆ ನಾಯಕರೊಬ್ಬರು ಸಾವಿರ ಕೋಟಿ ರೂ. ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಮನೋಹರ್‌ ಅವರು ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು. ನಂತರ ಈ ದೂರು ಇಲ್ಲಿನ ಗಾಂಧಿನಗರ ಠಾಣೆಗೆ ವರ್ಗಾವಣೆಗೊಂಡಿದೆ. 

ಅಧಿಕಾರವಿಲ್ಲದೇ ಹತಾಶರಾಗಿರುವ ಬಿಜೆಪಿಯ ಕೆಲ ನಾಯಕರು ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಿದ್ದು ಯತ್ನಾಳ್ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ. 

ಅಕ್ರಮ ಹಣ ವರ್ಗಾವಣೆ ನಡೆಯುತ್ತಿದ್ದು, ಹೇಳಿಕೆ ನೀಡಿದ ಯತ್ನಾಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನೋಹರ್‌ ದೂರಿನಲ್ಲಿ ತಿಳಿಸಿದ್ದರು.

error: Content is protected !!