ಚನ್ನಗಿರಿ: ಅದ್ಧೂರಿ ರಾಜ್ಯೋತ್ಸವಕ್ಕೆ ಸಿದ್ಧತೆ

ಚನ್ನಗಿರಿ: ಅದ್ಧೂರಿ ರಾಜ್ಯೋತ್ಸವಕ್ಕೆ ಸಿದ್ಧತೆ

ಚನ್ನಗಿರಿ, ಅ.27-  69 ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಿಸಲು ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಚನ್ನಗಿರಿ ತಹಶೀಲ್ದಾರ್ ಜಿ.ಎಸ್.ಶಂಕರಪ್ಪ ತಿಳಿಸಿದರು.

ಇಲ್ಲಿನ ಪ್ರಜಾಸೌಧದಲ್ಲಿ ಕರೆಯಲಾಗಿದ್ದ 69ನೇ ರಾಜ್ಯೋತ್ಸವ ಮತ್ತು ಭುವನೇಶ್ವರಿ ರಥಯಾತ್ರೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕಾಧ್ಯಕ್ಷ ಎಲ್.ಜಿ. ಮಧುಕುಮಾರ್ ಮಾತನಾಡಿದರು.

ಈ ವೇಳೆ ಮುಖಂಡ ಸಿ.ಹೆಚ್.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ, ಪುರಸಭೆ ಮುಖ್ಯಾಧಿ ಕಾರಿ ಕೃಷ್ಣಪ್ಪ ಡಿ.ಕಟ್ಟಿಮನಿ, ಕನ್ನಡ ನಾಡು ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕಾಧ್ಯಕ್ಷ ಮಲ್ಲನಾಯ್ಕ್ , ಕಸಾಪ ಹೋಬಳಿ ಅಧ್ಯಕ್ಷ ಜಿ.ಚಿನ್ನಸ್ವಾಮಿ, ಬುಳ್ಳಿ ನಾಗರಾಜ್, ಶಿರಸ್ತೆದಾರ್ ಮೋಹನ್ ಮತ್ತಿತರಿದ್ದರು.

error: Content is protected !!