ಭಾರೀ ಮಳೆಯಿಂದ ಕುಸಿದ ಮನೆಗಳು

ಭಾರೀ ಮಳೆಯಿಂದ ಕುಸಿದ ಮನೆಗಳು

ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ, ನಿರಾಶ್ರಿತರಿಗೆ ಸಾಂತ್ವನ

ದಾವಣಗೆರೆ, ಅ.27- ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕಿನ ದಿಂಡದಹಳ್ಳಿ ಮತ್ತು ಕೊಗ್ಗನೂರು ಗ್ರಾಮದಲ್ಲಿ ಸುರಿದ ಮಳೆಯಿಂದ ಕುಸಿದು ಬಿದ್ದಿರುವ ಮನೆ ವೀಕ್ಷಿಸಿ, ನಿರಾಶ್ರಿತರಿಗೆ ಸರ್ಕಾರ ಪರಿಹಾರವನ್ನೂ ಕೊಡುತ್ತದೆ. ಮನೆಯನ್ನೂ ಮಂಜೂರು ಮಾಡುತ್ತದೆ. ಯಾವುದೇ ಕಾರಣಕ್ಕೂ ನಿರಾಶ್ರಿತರು ಆತಂಕ ಪಡಬೇಡಿ ಎಂದು ಧೈರ್ಯ ತುಂಬಿದರು. 

ಈಚೆಗೆ ಸುರಿದ ಮಳೆಗೆ ಕ್ಷೇತ್ರದ ಸಾಕಷ್ಟು ಗ್ರಾಮಗಳಲ್ಲಿ ಮನೆಗಳು ಭಾಗಶಃ ಹಾನಿಯಾಗಿವೆ. ಅಲ್ಲದೇ ಮೆಕ್ಕೆಜೋಳ ಸೇರಿದಂತೆ ಇನ್ನಿತರೆ ಬೆಳೆಗಳೂ
ಹಾಳಾಗಿವೆ.  ಅಧಿಕಾರಿಗಳು ಹಾನಿಗೊಳ ಗಾದ ಪ್ರದೇಶಗಳಿಗೆ ಭೇಟಿ ನೀಡಿ ನಿರಾಶ್ರಿತರಿಗೆ ಪರಿಹಾರ ನೀಡುವ ಜೊತೆಗೆ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಸೂಚನೆ ನೀಡಿದರು.

ಇದೇ ವೇಳೆ ಜೆಜೆಎಂ ಯೋಜನೆಯಡಿ ಕುಡಿಯುವ ನೀರಿನ ಪೈಪ್‍ಲೈನ್ ಕಳಪೆ ಗುಣಮಟ್ಟದಿಂದ ಕೂಡಿದ್ದು,  ಗುಣಮಟ್ಟದ ಕಾಮಗಾರಿ ನಡೆಸಿ ಗ್ರಾಮಸ್ಥರಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪರಶುರಾಮ್, ಗಣೇಶಪ್ಪ, ಹೊನ್ನೂರಪ್ಪ, ಬಸಣ್ಣ, ಶ್ರೀಕಾಂತ್, ಕೆಂಚಪ್ಪ ಹಾಗೂ ಗ್ರಾಮಸ್ಥರು ಇದ್ದರು.

ವಾಲ್ಮೀಕಿ ಜಯಂತಿ: ದಿಂಡದಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಕೆ.ಎಸ್.ಬಸವಂತಪ್ಪ, ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳಿಗೆ ಶಿಕ್ಷಣ ಕೊಡಿಸಿ ಸತ್ಪ್ರಜೆಗಳನ್ನಾಗಿ ಮಾಡಬೇಕೆಂದು ಕಿವಿಮಾತು ಹೇಳಿದರು. 

ಈ ವೇಳೆ ಕಾಂಗ್ರೆಸ್ ಮುಖಂಡ ಮಂಜುನಾಥ್, ನಾಗರಾಜ್, ಗಣೇಶ್, ಪರಶುರಾಮ್, ಬಸಣ್ಣ ಇತರರು ಭಾಗವಹಿಸಿದ್ದರು.

error: Content is protected !!