ಇಂದಿನಿಂದ ಕೊಟ್ಟೂರೇಶ್ವರ ಸ್ವಾಮಿ ಪ್ರವಚನ

ದಾವಣಗೆರೆಯ ಕೊಟ್ಟೂರು ಶ್ರೀ ಗುರು ಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ವತಿಯಿಂದ ಭಕ್ತರು ಪಾದಯಾತ್ರೆ ಕೈಗೊಳ್ಳುವ ಮುನ್ನ ವಿರಕ್ತಮಠದ ಆವರಣದಲ್ಲಿ ಇಂದಿನಿಂದ ಇದೇ ದಿನಾಂಕ 17 ರವರೆಗೆ ಪ್ರತಿ ದಿನ ಸಂಜೆ 6 ರಿಂದ 8.30 ರವರೆಗೆ ಶ್ರೀ ಕೊಟ್ಟೂರು ಗುರು ಬಸವೇಶ್ವರರ ಪುರಾಣ-ಪ್ರವಚನ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಣಕುಪ್ಪಿ ಮುರುಗೇಶಪ್ಪ ತಿಳಿಸಿದ್ದಾರೆ. ಮರೋಳ ಹಿರೇಮಠದ ಮುದುಕಯ್ಯ ಶಾಸ್ತ್ರಿಗಳು ಪ್ರವಚನ ನಡೆಸಿಕೊಡಲಿದ್ದು, ಭಕ್ತರು ಪ್ರವಚನ ಭಾಗವಹಿಸಲು ಮುರುಗೇಶಪ್ಪ ಕೋರಿದ್ದಾರೆ.

error: Content is protected !!