ನಾಯಕ ವಿದ್ಯಾರ್ಥಿ ನಿಲಯದಲ್ಲಿ ಪುಣ್ಯಾನಂದಪುರಿ ಶ್ರೀಗಳ ಪುಣ್ಯಾರಾಧನೆ

ದಾವಣಗೆರೆ, ಮಾ.3- ಶ್ರೀ ವಾಲ್ಮೀಕಿ ಗುರುಪೀಠದ ಪ್ರಥಮ ಪೀಠಾಧಿಪತಿ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮಿಗಳವರ 15ನೇ ವರ್ಷದ ಪುಣ್ಯಾರಾಧನೆ ಯನ್ನು ನಗರದ ನಾಯಕ ವಿದ್ಯಾರ್ಥಿ ನಿಲಯದಲ್ಲಿ  ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ. ವೀರಣ್ಣ ಅವರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  ವಿಧಾನ ಪರಿಷತ್ ಮಾಜಿ ಸದಸ್ಯ ಅಬ್ದುಲ್ ಜಬ್ಬಾರ್, ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷ್ ಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಾಯಕ ವಿದ್ಯಾರ್ಥಿ ನಿಲಯದ ನಿರ್ದೇಶಕರುಗಳಾದ ಎನ್.ಎಂ. ಆಂಜನೇಯ ಗುರೂಜಿ, ಶ್ಯಾಗಲೆ ಮಂಜುನಾಥ್, ನರಸಿಂಹಯ್ಯ ಎಂ.ಬಿ ಕೇರಿ, ಎಸ್.ಕೆ ಸ್ವಾಮಿ, ಪರಮೇಶ್ ಪುಟ್ಟಣ್ಣನವರ್ ಮತ್ತು ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

error: Content is protected !!