ಕೊರೊನಾ ಸೋಂಕು ತಡೆಯಬೇಕಾಗಿದೆ

ಎಂಸಿಸಿ ಬಿ ಬ್ಲಾಕ್‌ನಲ್ಲಿ ನಡೆದ ಲಸಿಕಾ ಅಭಿಯಾನದಲ್ಲಿ ಗಡಿಗುಡಾಳ್ ಮಂಜುನಾಥ್

ದಾವಣಗೆರೆ, ಜ. 6- ದಿನೇ ದಿನೇ ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇದನ್ನು ತಡೆಯಬೇಕಾದ ಅವಶ್ಯಕತೆ ಇದೆ. ನಾವೆಲ್ಲರೂ ಎರಡು ಡೋಸ್ ಪಡೆದಿದ್ದೇವೆ. ನೀವೂ ಪಡೆದುಕೊಳ್ಳಿ ಎಂದು ಮಹಾನಗರ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಹೇಳಿದರು.

ಅವರು ನಗರದ ಎಂಸಿಸಿ ಬಿ ಬ್ಲಾಕ್‌ನ ನಾಲ್ಕು ಕಡೆಗಳಲ್ಲಿ 15 ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಲಸಿಕೆ ಪಡೆಯಲು ಬಂದವರಿಗೆ ಆತ್ಮಸ್ಥೈರ್ಯ ಹಾಗೂ ಧೈರ್ಯ ತುಂಬಿ ಮಾತನಾಡುತ್ತಿದ್ದರು.

ಗುಂಡಿ ಸ್ಕೂಲ್, ಎಆರ್ ಜಿ ಕಾಲೇಜು, ಡಿಆರ್ ಎಂ ಸೈನ್ಸ್ ಕಾಲೇಜು, ಬಿಆರ್ ಎಂ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಲಸಿಕಾ ಅಭಿಯಾನ ನಡೆಯಿತು.

error: Content is protected !!