ಅನುದಾನಕ್ಕೆ ಸಿಎಂ ಬಳಿ ರಾಮಪ್ಪ ಮನವಿ

ಹರಿಹರ, ಜ.5 – ಶಾಸಕ ಎಸ್. ರಾಮಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿ ಮಾಡಿ, ಹರಿಹರ ವಿಧಾನಸಭಾ ಕ್ಷೇತ್ರದ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸಲು ವಿನಂತಿಸಿಕೊಂಡಿದ್ದಾರೆ. ಈ ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಅನುದಾನ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

error: Content is protected !!