ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಜಸ್ಟಿನ್ ಡಿಸೋಜಾಗೆ ಜಿಲ್ಲಾ ಕಾಂಗ್ರೆಸ್‍ನಿಂದ ಸನ್ಮಾನ

ದಾವಣಗೆರೆ, ಜ.9 – ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿ, ವರ್ಷದ ವ್ಯಕ್ತಿ ಪ್ರಶಸ್ತಿ ಪಡೆದಿರುವ ಜಸ್ಟಿನ್ ಡಿಸೋಜಾ ಅವರನ್ನು   ಸಿದ್ದಗಂಗಾ ವಿದ್ಯಾ ಸಂಸ್ಥೆ ಆವರಣದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಶಿಕ್ಷಣ ಕ್ಷೇತ್ರದಲ್ಲಿ ಸಿದ್ದಗಂಗಾ ಸಂಸ್ಥೆಯ ಕೊಡುಗೆ ಅಪಾರವಾಗಿದ್ದು ಬಡವರು, ಶ್ರೀಮಂತರು ಎಲ್ಲರೂ ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುವಂತಹ ಶುಲ್ಕವಿದ್ದು, ಶಿಕ್ಷಣವು ಸಹ ಅತ್ಯುತ್ತಮ ದರ್ಜೆಯಲ್ಲಿ ದೊರೆಯುತ್ತಿದೆ ಎಂದು ಎಂದು ಶ್ಲ್ಯಾಘಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಸ್ಟಿನ್ ಡಿಸೋಜಾ ಅವರು ಸಿದ್ದಗಂಗಾ ವಿದ್ಯಾಸಂಸ್ಥೆಯ ಏಳಿಗೆಗೆ ಡಾ. ಶಾಮನೂರು ಶಿವಶಂಕರಪ್ಪ, ಶಾಮನೂರು ಮಲ್ಲಿಕಾರ್ಜುನ್ ಅವರ ಕೊಡುಗೆ ಅಪಾರವಾಗಿದ್ದು ತಾವು ಹಾಗೂ ನಮ್ಮ ಸಂಸ್ಥೆ ಕೊನೆಯವರೆಗೂ ಅವರ ಸಹಾಯ ವನ್ನು ಮರೆಯುವುದಿಲ್ಲ ಎಂದು ಕೃತಜ್ಞತೆ ಸಲ್ಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ವಿಪಕ್ಷ ನಾಯಕ ನಾಗರಾಜ್ ಮಾತನಾಡಿದರು.

ಪಾಲಿಕೆ ಸದಸ್ಯರಾದ ಜೆ.ಎನ್. ಶ್ರೀನಿವಾಸ್, ಶ್ರೀಮತಿ ಶ್ವೇತಾ ಜೆ.ಎನ್. ಶ್ರೀನಿವಾಸ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ.ಎಲ್.ಹರೀಶ್ ಬಸಾಪುರ, ದಾಕ್ಷಾಯಣಮ್ಮ, ರಾಜೇಶ್ವರಿ, ಅಬ್ದುಲ್ ಜಬ್ಬಾರ್, ಯುವರಾಜ್, ಸಿದ್ದೇಶ್, ಪ್ರವೀಣ್, ಶಮಿ ದೇವರಹಟ್ಟಿ, ಅಲೆಕ್ಸಾಂಡರ್ ಜಾನ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

error: Content is protected !!