40, 42ನೇ ವಾರ್ಡುಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ

ದಾವಣಗೆರೆ, ಜ.21- ನಗರ ಪಾಲಿಕೆ 40ನೇ ವಾರ್ಡಿನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 5 ಕೋಟಿ 15 ಲಕ್ಷ ರೂ.ಗಳ ಕಾಮಗಾರಿಗಳಿಗೆ ಶಾಸಕ ಎಸ್.ಎ.ರವೀಂದ್ರನಾಥ್, ಸಂಸದ ಜಿ.ಎಂ.ಸಿದ್ದೇಶ್ವರ, 40ನೇ ವಾರ್ಡಿನ ಪಾಲಿಕೆ ಸದಸ್ಯರಾದ ಶ್ರೀಮತಿ ವೀಣಾ ನಂಜಪ್ಪ ಅವರುಗಳು ಭೂಮಿ ಪೂಜೆ ನೆರವೇರಿಸುವುದರ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಮಹಾಪೌರ ಎಸ್.ಟಿ.ವೀರೇಶ್, ಉಪ ಮಹಾ ಪೌರರಾದ ಶ್ರೀಮತಿ ಶಿಲ್ಪ ಜಯಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಎಲ್.ಡಿ.ಗೋಣೆಪ್ಪ, ಉಮಾ ಪ್ರಕಾಶ್, ಗೀತಾ ದಿಳ್ಯೆಪ್ಪ, ರೇಣುಕಾ ಶ್ರೀನಿವಾಸ್, ಪಾಲಿಕೆ ಸದಸ್ಯರಾದ ಪ್ರಸನ್ನಕುಮಾರ್, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ಗಣೇಶಪ್ಪ, ದೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಪಾಲಿಕೆ ಆಯುಕ್ತ ವಿಶ್ವನಾಥ್ ಪಿ.ಮುದಜ್ಜಿ ಇದ್ದರು.

ಬಿಜೆಪಿ ಮುಖಂಡರಾದ ಶಿವರಾಜ್ ಪಾಟೀಲ್, ಉಜ್ಜಿನಪ್ಪ, ಹೇಮಂತ್‌ ಕುಮಾರ್, ಅರುಣ್‌ (ರೇವಣ್ಣ), ರಾಯಣ್ಣ, ಶಿವಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

42ನೇ ವಾರ್ಡ್ : ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 42ನೇ ವಾರ್ಡಿನಲ್ಲಿ 1 ಕೋಟಿ 70 ಲಕ್ಷ ರೂ.ಗಳ ಕಾಮಗಾರಿಗಳಿಗೆ ಶಾಸಕ ಎಸ್.ಎ.ರವೀಂದ್ರನಾಥ್, ಸಂಸದ ಜಿ.ಎಂ.ಸಿದ್ದೇಶ್ವರ, 42ನೇ ವಾರ್ಡಿನ ಪಾಲಿಕೆ ಸದಸ್ಯರಾದ ಶ್ರೀಮತಿ ಗೌರಮ್ಮ ಗಿರೀಶ್ ಅವರುಗಳು ಭೂಮಿ ಪೂಜೆ ಮಾಡುವುದರ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಮಾಜಿ ಉಪಮಹಾಪೌರರಾದ ಶ್ರೀಮತಿ ಸೌಮ್ಯ ನರೇಂದ್ರಕುಮಾರ್, ಪಾಲಿಕೆ ಮಾಜಿ ಸದಸ್ಯರಾದ ಹೆಚ್.ಎನ್.ಶಿವಕುಮಾರ್, ಉಜ್ಜಿನಪ್ಪ, ರೇವಣ್ಣ, ನರೇಂದ್ರಕುಮಾರ್,
ಎಸ್.ಜಿ. ಗಿರೀಶ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಸಚ್ಚಿನ್, ಮಹೇಂದ್ರ ಆಟೋರಾಜ, ಯಲ್ಲಪ್ಪ, ಗೊರವಪ್ಪ, ಶಿವಾಜಿರಾವ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!